ಕುಶಾಲನಗರ, ಸೆ. 19: ಕಾವೇರಿ ಮಹಾಪುಷ್ಕರ ಅಂಗವಾಗಿ ಕುಶಾಲನಗರದಲ್ಲಿ ಜೀವನದಿ ಕಾವೇರಿಗೆ ವಿಶೇಷ ಮಹಾ ಆರತಿ ಕಾರ್ಯಕ್ರಮ ತಾ. 21 ರಂದು ಹಮ್ಮಿಕೊಳ್ಳಲಾಗಿದೆ. ಕುಶಾಲನಗರ ಮಾತೆ ಕಾವೇರಿ ಮಹಾ ಆರತಿ ಬಳಗ ಆಶ್ರಯದಲ್ಲಿ ಸ್ಥಳೀಯ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದ ಬಳಿಯ ಕಾವೇರಿ ನದಿ ತಟದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ಶ್ರೀ ಶಂಕರಪರಮಾನಂದ ಟ್ರಸ್ಟ್‍ನ ಶ್ರೀ ಗಣೇಶ ಸ್ವರೂಪಾನಂದ ಸ್ವಾಮೀಜಿ, ಬೆಂಗಳೂರಿನ ಆಚಾರ್ಯ ಶ್ರೀ ಗುರುಪ್ರಕಾಶ್ ಗುರೂಜಿ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ಶಕ್ತಿ’ ಸಹಾಯಕ ಸಂಪಾದಕ ಚಿ.ನಾ. ಸೋಮೇಶ್ ಮಹಾಪುಷ್ಕರದ ಮಹತ್ವದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕುಶಾಲನಗರದ ಸರ್ವ ಮಹಿಳಾ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ಜರುಗಲಿದೆ.

ಸಂಜೆ 6 ಗಂಟೆಗೆ ಜೀವನದಿ ಕಾವೇರಿಗೆ ಬಾಗಿನ ಅರ್ಪಣೆಯೊಂದಿಗೆ ವಿಶೇಷ ಮಹಾ ಆರತಿ ನಡೆಯಲಿದೆ.