ಸಿದ್ದಾಪುರ, ಸೆ. 20: ಇತ್ತೀಚೆಗೆ ಸಿದ್ದಾಪುರದಲ್ಲಿ ಪ್ರತಿಭಟನಾ ಸಭೆಯೊಂದರಲ್ಲಿ ಚೆಟ್ಟಳ್ಳಿ ಗ್ರಾ. ಪಂ. ಸದಸ್ಯ ಕಂಠಿ ಕಾರ್ಯಪ್ಪ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಮುಸ್ತಫ ಸಿದ್ದಾಪುರ ಠಾಣೆಗೆ ನೀಡಿದ ಪುಕಾರಿನ ಮೇರೆಗೆ ಸಿದ್ದಾಪುರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಅಲ್ಲದೆ ಕಂಠಿ ಕಾರ್ಯಪ್ಪನನ್ನು ಬಂಧಿಸುವಂತೆ ಮುಸ್ಲಿಂ ಸಂಘಟನೆಗಳು ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಿತ್ತು. ಇದೀಗ ವೀರಾಜಪೇಟೆಯ ನ್ಯಾಯಾಲಯದಲ್ಲಿ ಕಂಠಿ ಕಾರ್ಯಪ್ಪ ಅವರಿಗೆ ಷರತ್ತುಬದ್ದ ಜಾಮೀನು ಲಭಿಸಿದೆ.