ಕುಶಾಲನಗರ, ಸೆ. 21: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಿಂದೂ ಮಹಾಸಭಾ 68 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ರಾಜು ಹೇಳಿದರು.

ಮಾದಾಪಟ್ಟಣದ ಜೋಡಿ ಬಸವೇಶ್ವರ ದೇವಾಲಯ ಸಭಾಂಗಣದಲ್ಲಿ ನಡೆದ ಅಖಿಲ ಭಾರತ ಹಿಂದೂ ಮಹಾಸಭಾದ ಕೊಡಗು ಜಿಲ್ಲಾ ಘಟಕದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಆಗ್ರಹಿಸಿ 1947 ರಿಂದಲೂ ಹಿಂದೂ ಮಹಾಸಭಾ ನಡೆಸಿರುವ ಹೋರಾಟದ ಬಗ್ಗೆ ಅವರು ಸಭೆಗೆ ವಿವರ ಒದಗಿಸಿದರು. ರಾಜ್ಯ ಸಮಿತಿ ಕಾರ್ಯದರ್ಶಿ ಭಾರ್ಗವ್ ಪ್ರಾಸ್ತಾವಿಕ ನುಡಿಗಳಾಡಿದರು. ಘಟಕದ ಜಿಲ್ಲಾಧ್ಯಕ್ಷ ಶ್ರೀನಿವಾಸ ರೈ ಅಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಪಕ್ಷಗಳನ್ನು ತೊರೆದು 30 ಕ್ಕೂ ಅಧಿಕ ಮಂದಿ ಹಿಂದೂ ಮಹಾಸಭಾಕ್ಕೆ ಸೇರ್ಪಡೆ ಗೊಂಡರು. ರಾಜ್ಯ ಸಂಘಟನಾ ಕಾರ್ಯದರ್ಶಿ ಲೋಹಿತ್, ಕೊಡಗು ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಯಮುನಾ, ಬೆಂಗಳೂರು ಘಟಕ ಅಧ್ಯಕ್ಷ ರವಿ ಮೊಗರ್, ಪ್ರಮುಖರಾದ ಮಹೇಶ್ ಇದ್ದರು.