ವೀರಾಜಪೇಟೆ, ಸೆ. 21: ಕೊಡಗು ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಪಟ್ಟಣದಲ್ಲಿರುವ ಅಮರ್ ಜವಾನ್ ಸ್ಮಾರಕಕ್ಕೆ ಹುತಾತ್ಮ ಯೋಧರ ಜ್ಞಾಪಕಾರ್ಥವಾಗಿ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಪುಷ್ಪಗುಚ್ಚ ಅರ್ಪಿಸಿ ನಮನ ಸಲ್ಲಿಸಿದರು. ಇದೇ ಸಂದರ್ಭ ಮಡಿಕೇರಿ ಇಸಿಎಚ್ ಪಾಲಿಕ್ಲಿನಿಕ್‍ನ ಡಾ. ಕರ್ನಲ್ ನಾಳಿಯಂಡ ಕರುಂಬಯ್ಯ, ತಹಶೀಲ್ದಾರ್ ಆರ್. ಗೋವಿಂದರಾಜು, ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ. ಜೀವನ್, ಸಂತ ಅನ್ನಮ್ಮ ದೇವಾಲಯದ ಧರ್ಮಗುರು ಮದಲೈಮುತ್ತು, ಮಾಜಿ ಸೈನಿಕರ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ನಂಜಪ್ಪ, ಕೊಡವ ಸಮಾಜದ ಅಧ್ಯಕ್ಷ ವಾಂಚಿರ ನಾಣಯ್ಯ, ಹೆಗ್ಗಡೆ ಸಮಾಜದ ಅಧ್ಯಕ್ಷ ಪಿ.ಜಿ. ಅಯ್ಯಪ್ಪ, ಬಿಲ್ಲವ ಸಮಾಜದ ಅಧ್ಯಕ್ಷ ರಾಜ, ಕೊಡವ ಮುಸ್ಲಿಂ ಅಸೋಸಿಯೆಷನ್ ಅಧ್ಯಕ್ಷ ಡಿ.ಹೆಚ್. ಸೂಫಿ ಮತ್ತಿತರರು ಉಪಸ್ಥಿತರಿದ್ದರು. ಹುತಾತ್ಮ ಯೋಧರ ಸ್ಮರಣಾರ್ಥ ಗಾಳಿಯಲ್ಲಿ ಮೂರು ಸುತ್ತು ಕುಶಲ ತೋಪು ಹಾರಿಸಲಾಯಿತು.