ಮಡಿಕೇರಿ, ಸೆ. 23: ಮಡಿಕೇರಿ ನಗರ ದಸರಾ ಸಮಿತಿ ಮತ್ತು ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ವತಿಯಿಂದ ಬಹುಭಾಷಾ ಕವಿಗೋಷ್ಠಿ ತಾ. 25 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್, ದಸರಾ ಬಹುಭಾಷಾ ಕವಿಗೋಷ್ಠಿ ಸಮಿತಿ ಅಧ್ಯಕ್ಷ ಐತಿಚಂಡ ರಮೇಶ್ ಉತ್ತಪ್ಪ, ನಗರ ದಸರಾ ಸಮಿತಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ನಗರ ದಸರಾ ಸಮಿತಿ ಕಾರ್ಯಧ್ಯಕ್ಷ ಮಹೇಶ್ ಜೈನಿ, ಪ್ರಧಾನ ಕಾರ್ಯದರ್ಶಿ ಚುಮ್ಮಿ ದೇವಯ್ಯ, ಖಜಾಂಚಿ ಸಂಗೀತ ಪ್ರಸನ್ನ, ನಗರಸಭೆ ಆಯುಕ್ತೆ ಬಿ. ಶುಭಾ, ಪ್ರೆಸ್‍ಕ್ಲಬ್ ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಕುಟ್ಟಪ್ಪ, ಪತ್ರಿಕಾ ಭವನದ ಮ್ಯಾನೇಜಿಂಗ್ ಟ್ರಸ್ಟಿ ಮನುಶೆಣೈ, ಖ್ಯಾತ ಸಾಹಿತಿ ಹಾಗೂ ಹಿರಿಯ ಪತ್ರಕರ್ತ ಗಿರೀಶ್ ರಾವ್ (ಜೋಗಿ), ಮೂವೇರ ರೇಖಾ ಪ್ರಕಾಶ್, ಕೊಟ್ಟಕೇರಿಯನ ಲೀಲಾ ದಯಾನಂದ, ನಾಗೇಶ್ ಕಾಲೂರು ಇತರರು ಭಾಗವಹಿಸಲಿದ್ದಾರೆ.