ಸಿದ್ದಾಪುರ, ಸೆ. 24: ವಾಹನ ಚಾಲಕರ ಮಜ್ದೂರ್ ಸಂಘದ ವತಿಯಿಂದ 24ನೇ ವರ್ಷದ ಆಯುಧ ಪೂಜಾ ಕಾರ್ಯಕ್ರಮವನ್ನು ತಾ. 29 ರಂದು ಅದ್ಧೂರಿಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸೂದನ ಸತೀಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.29 ರಂದು ಬೆಳಿಗ್ಗೆ 9 ಗಂಟೆಗೆ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಕಾಫಿ ಬೆಳೆಗಾರರಾದ ವೆಂಕಪ್ಪ ರೈ ದ್ವಜಾರೋಹಣ ನೆರವೇರಿಸಲಿದ್ದು, ಕಾರ್ಯಕ್ರಮವನ್ನು 9.30 ಕ್ಕೆ ಪ್ರದೀಪ್ ಶೆಟ್ಟಿ ಉದ್ಘಾಟಿಸಲಿದ್ದಾರೆ.

ಸಿದ್ದಾಪುರ ಠಾಣಾಧಿಕಾರಿ ಜಿ.ಕೆ ಸುಬ್ರಮಣ್ಯ ಅವರು ಜಿಲ್ಲಾ ಮಟ್ಟದ ಸೈಕಲ್ ಸ್ಪರ್ಧೆಯನ್ನು ಉದ್ಘಾಟಿಸಲಿದ್ದು, ಜಿಲ್ಲಾ ಮಟ್ಟದ ರಸ್ತೆ ಓಟ ಸ್ಪರ್ಧೆಗೆ ಲಯನ್ಸ್ ಕ್ಲಬ್ ಅಧ್ಯಕ್ಷ ಪಟ್ಟಡ ಶ್ಯಾಂ ಅಯ್ಯಪ್ಪ ಚಾಲನೆ ನೀಡಲಿದ್ದಾರೆ. ಬಳಿಕ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 6.30 ಕ್ಕೆ ಸಾಮೂಹಿಕ ಆಯುಧ ಪೂಜೆ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂದನ ಸತೀಶ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಜಿ. ಬೋಪಯ್ಯ, ರತ್ನಾಕರ ಶೆಟ್ಟಿ, ವಿಜು ಸುಬ್ರಮಣಿ, ಜನೀಶ್, ಅಜಿತ್ ಕರುಂಬಯ್ಯ, ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಮಣಿ, ಮತ್ತಿತರರು ಪಾಲ್ಗೊಳ್ಳುವರು. ರಾತ್ರಿ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಕೆ.ಎಂ. ಅನೀಶ್, ಉಪಾಧ್ಯಕ್ಷ ರತೀಶ್ ಎಂ.ಹೆಚ್., ಪದಾಧಿಕಾರಿಗಳಾದ ರಾಧಾಕೃಷ್ಣ, ರಾಜು, ಎಂ.ಕೆ. ಮಣಿ ಇದ್ದರು.