ಮಡಿಕೇರಿ, ಸೆ. 25: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ಕೆ. ನಿಡುಗಣೆ ಗ್ರಾ.ಪಂ. ಆಶ್ರಯದಲ್ಲಿ ಎನ್‍ಎಸ್‍ಎಸ್ ದಿನಾಚರಣೆ ಮತ್ತು ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಕೂಟುಹೊಳೆ ಸಮುದಾಯ ಭವನದಲ್ಲಿ ಸಭಾ ಕಾರ್ಯಕ್ರಮ ಬಳಿಕ ಶ್ರಮದಾನ ಮಾಡಲಾಯಿತು.

ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಪಾರ್ವತಿ ಅಪ್ಪಯ್ಯ ವಹಿಸಿ ಮಾತನಾಡಿ ಎನ್‍ಎಸ್‍ಎಸ್ ಸಾಧನೆಯನ್ನು ಮೆಲುಕು ಹಾಕಿದರು. ಬೆಂಗಳೂರಿನ ಯುಕೋ ಬ್ಯಾಂಕ್‍ನ ನಿವೃತ್ತ ಹಿರಿಯ ಪ್ರಬಂಧಕ ವೆಂಕಟೇಶ್ ಹೆಗ್ಡೆ ಉಪನ್ಯಾಸ ನೀಡಿದರು. ಬಳಿಕ ಸಾಂಸ್ಕøತಿಕ ಹಾಗೂ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.