ಮಡಿಕೇರಿ, ಸೆ. 25: ಜಿಲ್ಲೆಯ ಎಲ್ಲಾ ನ್ಯಾಯಾಲಯದಲ್ಲಿ ಅಕ್ಟೋಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ಲೋಕ ಅದಾಲತ್ ಏರ್ಪಡಿಸಲಾಗಿದೆ. ಈ ಅದಾಲತ್‍ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣ (ರಾಜಿಯಾಗಬಹುದಾದ ಪ್ರಕರಣಗಳು) ಮತ್ತು ವ್ಯಾಜ್ಯಾ ಪೂರ್ವ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಹಣ ವಸೂಲಾತಿ ಬಾಕಿ ಹಾಗೂ ವ್ಯಾಜ್ಯ ಪೂರ್ವ ಮೋಟಾರು ವಾಹನ ಅಪಘಾತ ಪರಿಹಾರ ವ್ಯಾಜ್ಯ, ವಿಮಾ ಪ್ರಕರಣಗಳು, ಕಾರ್ಮಿಕ ಮತ್ತು ಕೌಟುಂಬಿಕ ವ್ಯಾಜ್ಯಾಗಳು, ನೀರು ವಿದ್ಯುಚ್ಛಕ್ತಿಗೆ ಸಂಬಂಧಿಸಿದ ವ್ಯಾಜ್ಯಗಳು, ಸಿವಿಲ್ ಮತ್ತು ಕಂದಾಯ ಪ್ರಕರಣಗಳು, ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ಸಂಚಾರ, ಲಘು ಪ್ರಕರಣಗಳು, ಸೇವಾ ವ್ಯಾಜ್ಯಗಳು, ಕಾನೂನಿನ್ವಯ ರಾಜಿಯಗಬಹುದಾದ ಎಲ್ಲಾ ತರಹದ ಪ್ರಕರಣಗಳನ್ನು ಜನತಾ ನ್ಯಾಯಾಲಯಗಳ ಮೂಲಕ ಇತ್ಯರ್ಥಪಡಿಸಲಗುವದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿ.ಜೆ.ಎಂ.ನ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.