ಬೆಂಗಳೂರು, ಸೆ. 27: ಇಂಡಿಯಾ ಟುಡೆ ಸಮೂಹ ಆಯೋಜಿಸಿದ್ದ ಕಾರ್ಯಕ್ರಮ ವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿರುವ ಜಿಲ್ಲೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಕೊಡಗು ಜಿಲ್ಲೆಯೂ ಪುರಸ್ಕಾರಕ್ಕೆ ಭಾಜನವಾಗಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಮುಖ್ಯಮಂತ್ರಿ ಗಳಿಂದ ಪುರಸ್ಕಾರ ಸ್ವೀಕರಿಸಿದರು.