ಕುಶಾಲನಗರ, ¸.É 29 : ಕುಶಾಲನಗರದಲ್ಲಿ ಜಯ ಕರ್ನಾಟಕ ವತಿಯಿಂದ ದಸರಾ ಪ್ರಯುಕ್ತ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷರಾದ ಹೆಚ್.ಎನ್. ಮುರಳೀಧರ್ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ವಕೀಲರಾದ ಕೆ.ಎಸ್. ವೆಂಕಟರಮಣರಾವ್, ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್, ನಗರ ಘಟಕದ ಅಧ್ಯಕ್ಷ ಗುರು ಮತ್ತಿತರರು ಇದ್ದರು. ಕ್ರೀಡಾಕೂಟದಲ್ಲಿ 16 ತಂಡಗಳು ನೋಂದಾಯಿಸಿದ್ದು ಆರಂಭಿಕ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.