ಸುಂಟಿಕೊಪ್ಪ, ಅ. 1: ಸುಂಟಿಕೊಪ್ಪ ಮಲೆಯಾಳಿ ಸಮಾಜದ ವತಿಯಿಂದ 11ನೇ ವರ್ಷದ ಓಣಂ ಆಚರಣೆಯನ್ನು ತಾ. 2 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಮಂಜುನಾಥಯ್ಯ ಮಿನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಮಲೆಯಾಳಿ ಸಮಾಜದ ಅಧ್ಯಕ್ಷ ಪಿ.ಸಿ. ಮೋಹನ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 10 ವರ್ಷಗಳಿಂದ ಮಲೆಯಾಳಿ ಸಮಾಜ ಭಾಂದವರಿಗಾಗಿ ವೈಶಿಷ್ಟ ಪೂರ್ಣ ಕಾರ್ಯಕ್ರಮ ಹಾಗೂ ಭಾಂದವರ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ದಿಸೆಯಲ್ಲಿ ಸಮಾರಂಭವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ ಎಂದರು.

ಸಮಾರಂಭದ ಉದ್ಘಾಟನೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ನೇರವೇರಿಸಲಿರುವರು. ಮುಖ್ಯ ಭಾಷಣಕಾರರಾಗಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಕೆ. ಲೋಕೇಶ್ ಆಗಮಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹಾಸನ ಗ್ರಾಹಕರ ವ್ಯಾಜ್ಯ ವೇದಿಕೆಯ ಅಧ್ಯಕ್ಷ ಎ. ಲೋಕೇಶ್ ಕುಮಾರ್, ಮಾಜಿ ಜಿ.ಪಂ. ಅಧ್ಯಕ್ಷ ಪಿ.ಎಂ. ವಿಜಯ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ, ಜಿ.ಪಂ. ಸದಸ್ಯ ಪಿ.ಎಂ. ಲತೀಫ್, ರಾಜ್ಯ ಎಐಟಿಯುಸಿ ಕಾರ್ಯದರ್ಶಿ ನಾಪಂಡ ಮುತ್ತಪ್ಪ, ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್, ಸುಂಟಿಕೊಪ್ಪ ವಿಎಸ್‍ಎಸ್‍ಎನ್ ಅಧ್ಯಕ್ಷ ಎನ್.ಸಿ. ಪೊನ್ನಪ್ಪ , ರಾಮ ಸೇವಾ ಸಮಿತಿ ಕಾಂiÀರ್iದರ್ಶಿ ಸುದರ್ಶನ್ ನಾಯ್ಡು, ಕಾಫಿ ಬೆಳೆಗಾರ ಜಿ.ಜಿ. ಹೇಮಂತ್, ವಿಶೇಷ ಆಹ್ವಾನಿತರಾಗಿ ಸೋಮವಾರಪೇಟೆ ಹಿಂದೂ ಮಲೆಯಾಳಿ ಸಮಾಜದ ಅಧ್ಯಕ್ಷ ಪಿ.ಡಿ. ಪ್ರಕಾಶ್, ಮಡಿಕೇರಿ ಸಮಾಜದ ಅಧ್ಯಕ್ಷ ಕೆ.ಎಸ್. ರಮೇಶ, ಸಿದ್ದಾಪುರ ಕೈರಳಿ ಸಮಾಜದ ಅಧ್ಯಕ್ಷ ಶ್ರೀನಿವಾಸ್, ಚೆಟ್ಟಳ್ಳಿ ಸಮಾಜದ ಅಧ್ಯಕ್ಷ ಶಶಿಕುಮಾರ್, ಮೂರ್ನಾಡಿನ ಬಾಬು, ಕಾಜೂರು ಸಮಾಜದ ಅಧ್ಯಕ್ಷ ಭಾಸ್ಕರ, ಮರಗೋಡು ಸಮಾಜದ ಅಧ್ಯಕ್ಷ ಬಾಲಕೃಷ್ಣ, ನಾಕೂರು ಸಮಾಜದ ಅಧ್ಯಕ್ಷ ವಿ.ಕೆ. ಗಂಗಾಧರ ಅವರುಗಳು ಆಗಮಿಸಲಿರುವರು ಎಂದರು. ಗೋಷ್ಠಿಯಲ್ಲಿ ಆರ್. ರಮೇಶ್ ಪಿಳ್ಳೆ, ಉಪಾಧ್ಯಕ್ಷ ಭಾಸ್ಕರನ್, ಗೌರವಾಧ್ಯಕ್ಷ ಶಿವಮಣಿ, ಕಾರ್ಯದರ್ಶಿ ರಂಜಿತ, ಕುಮಾರ್, ಕೆ.ಎಂ. ಸತೀಶ್, ರಾಜೇಶ್, ಗಿರೀಶ್, ಇ.ಕೆ. ಪ್ರಕಾಶ್ ಉಪಸ್ಥಿತರಿದ್ದರು.