ನಾಪೆÇೀಕ್ಲು, ಅ. 2: ಚೆಯ್ಯಂಡಾಣೆ ಸಮೀಪದ ಚೇಲಾವರ ಜಲಪಾತದ ನೀರಿನಲ್ಲಿ ಮುಳುಗಿ ಮೃತಪಟ್ಟ ಮಂಡೇಡ ದರ್ಶನ್ (22) ಮೃತ ದೇಹವನ್ನು ಇಂದು ಮಧ್ಯಾಹ್ನ ಹೊರ ತೆಗೆಯಲಾಯಿತು.

ಅಗ್ನಿ ಶಾಮಕದಳ, ಸ್ಥಳೀಯರು ಹಾಗೂ ಕುಂಜಿಲ ಗ್ರಾಮದ ಯುವಕರ ತಂಡ ಸತತವಾಗಿ ಮೂರು ಗಂಟೆಗಳ ಕಾಲ ಶೋಧ ನಡೆಸಿ ಮೃತದೇಹವನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು. ನಂತರ ಮೃತದೇಹವನ್ನು ವೀರಾಜಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ನೀಡಲಾಯಿತು. ಮಡಿಕೇರಿ ಗ್ರಾಮಾಂತರ ಠಾಣಾ ವೃತ್ತನಿರೀಕ್ಷಕ ಪ್ರದೀಪ್ ನೇತೃತ್ವದಲ್ಲಿ ಸೂಕ್ತ ಬಂದೋಬಸ್ತ್ ಏರ್ಪಡಿಸಲಾಗಿತ್ತು.