*ಗೋಣಿಕೊಪ್ಪಲು, ಅ. 3: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಿರ್ಮಾಣದ ಸಾಮಥ್ರ್ಯದ ಗೋದಾಮನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.

ಹಾತೂರು ಕೃಷಿ ಪತ್ತಿನ ಸಹಕಾರ ಸಂಘದ ಅವರಣದಲ್ಲಿ 2014-15ನೇ ಸಾಲಿನ ಆರ್.ಎಂ.ಸಿ. ಸದಸ್ಯ ಗುಮ್ಮಟ್ಟೀರ ಕಿಲನ್ ಗಣಪತಿ ಅನುದಾನದಲ್ಲಿ ಮುಖ್ಯ ಮಾರುಕಟ್ಟೆ ವ್ಯಾಪ್ತಿಗೆ ಬರುವ ಗೋದಾಮನ್ನು ರೂ. 25 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗಿದೆ.

ರೈತರ ಅನುಕೂಲಕ್ಕಾಗಿ ಜಿಲ್ಲೆಯಾದ್ಯಂತ ಹೆಚ್ಚು ಗೋದಾಮು ಗಳು ನಿರ್ಮಾಣವಾಗ ಬೇಕಾಗಿದೆ. ಇದರ ಉಪಯೋಗವನ್ನು ರೈತರು ಪಡೆದುಕೊಳ್ಳುವಂತೆ ಬೋಪಯ್ಯ ಈ ಸಂದರ್ಭ ತಿಳಿಸಿದರು.

ಶಾಸಕ ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ, ತಾ.ಪಂ. ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್, ತಾ.ಪಂ. ಸದಸ್ಯೆ ಜಯಾ ಪೂವಯ್ಯ, ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಭಾರತೀಶ್ ಹಾತೂರು ಗ್ರಾ.ಪಂ. ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ ಕುಪ್ಪಂಡ ಪೂವಣ್ಣ ಸದಸ್ಯರುಗಳಾದ ಸುಭಾಷ್, ಮಾಥ್ಯು, ವಿ.ಎಸ್.ಎಸ್.ಎನ್ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ, ಆರ್.ಎಂ.ಸಿ. ಅಧ್ಯಕ್ಷ ಸುವಿನ್ ಗಣಪತಿ, ಆರ್.ಎಂ.ಸಿ. ಸದಸ್ಯರಾದ ಚಿಯಕ್‍ಪೂವಂಡ ಸುಬ್ರಮಣಿ, ಗುಮ್ಮಟ್ಟೀರ ಕಿಲನ್ ಗಣಪತಿ, ತಾಲೂಕು ಬಿ.ಜೆಪಿ. ಅಧ್ಯಕ್ಷ ಅರುಣ್ ಭೀಮಯ್ಯ, ಯುವ ಮೂರ್ಚಾ ಅಧ್ಯಕ್ಷ ಕುಟ್ಟಂಡ ಅಜಿತ್ ಕರುಂಬಯ್ಯ, ಮಡಿಕೇರಿ ಕ್ಷೇತ್ರ ವೀಕ್ಷಕ ಐನಂಡ ಜಪ್ಪು ಅಯ್ಯಪ್ಪ, ಜಿಲ್ಲಾ ಬಿ.ಜೆ.ಪಿ. ಪ್ರಧಾನ ಕಾರ್ಯದರ್ಶಿ ರಾಬಿನ್ ದೇವಯ್ಯ, ಬಿ.ಜೆ.ಪಿ. ಮಾಜಿ ಜಿಲ್ಲಾಧ್ಯಕ್ಷ ಮಂಡೇಪಂಡ ಸುಜಾ ಕುಶಾಲಪ್ಪ, ಜಿಲ್ಲಾ ಬಿ.ಜೆ.ಪಿ. ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ ಉಪಸ್ಥಿತರಿದ್ದರು.