ವೀರಾಜಪೇಟೆ, ಅ. 2: ಪ್ರತಿದಿನ ಸ್ವಚ್ಛತೆಯಲ್ಲಿ ಪಾಲ್ಗೊಳ್ಳುತ್ತಿರುವ ಪೌರ ಕಾರ್ಮಿಕರಿಗೆ ಎಲ್ಲಾ ರೀತಿಯಿಂದಲೂ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಹಲವಾರು ಕಾರ್ಯಕ್ರಮ ಗಳನ್ನು ಹಮ್ಮಿಕೊಂಡಿದ್ದು, ಅದನ್ನು ಕಾರ್ಮಿಕರು ಸದುಪಯೋಗ ಪಡಿಸಿ ಕೊಳ್ಳಬೇಕು ಎಂದು ವೀರಾಜಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ ಜೀವನ್ ಹೇಳಿದರು.

ಇಲ್ಲಿನ ಪುರಭವನದಲ್ಲಿ ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಪೌರ ಕಾರ್ಮಿಕರಿಗೆ ಆಯೋಜಿಸಲಾಗಿದ್ದ ಆಟೋಟ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದಿನಂಪ್ರತಿ ಸ್ವಚ್ಛತೆಯ ಜಂಜಾಟದಲ್ಲಿ ಇರುವ ಕಾರ್ಮಿಕರಿಗೆ ಆಟೋಟಗಳ ಸ್ಪರ್ಧೆಯೊಂದಿಗೆ ವಿವಿಧ ವಿನೋದಾವಳಿಗಳನ್ನು ಏರ್ಪಡಿಸಿದ್ದು ಪೌರ ಕಾರ್ಮಿಕರು ಕೂಡ ಸಮಾಜದೊಂದಿಗೆ ಬೆರೆಯುವಂತಹ ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.

ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ರಚನ್ ಮೇದಪ್ಪ, ಮುಖ್ಯಾಧಿ ಕಾರಿ ಕೃಷ್ಣಪ್ರಸಾದ್, ಅಭಿಯಂತರ ಎನ್.ಪಿ. ಹೇಮ್ ಕುಮಾರ್ ಸದಸ್ಯ ರಾದ ವಿಶ್ವನಾಥ್, ಚಂದ್ರಶೇಖರ್, ಸಚಿನ್ ಕುಟ್ಟಯ್ಯ ಯೋಜನಾಧಿಕಾರಿ ಶೈಲಾ ಉಪಸ್ಥಿತರಿದ್ದರು.