ಮಡಿಕೇರಿ, ಅ. 5: ಮೂರ್ನಾಡು ಪದವಿಪೂರ್ವ ಕಾಲೇಜು ವತಿಯಿಂದ ಹಾಕತ್ತೂರು ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ವಾರ್ಷಿಕ ಶಿಬಿರದಲ್ಲಿ ನಿನ್ನೆ ದಿನ ಕೊಡಗು ಜಾನಪದ ಷರಿಷತ್ ವತಿಯಿಂದ ಗೀತಗಾಯನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಪರಿಷತ್‍ನ ಜಿಲ್ಲಾ ಅಧ್ಯಕ್ಷ ಬಿ.ಜಿ. ಅನಂತಶಯನ ಉದ್ಘಾಟಿಸಿದರು. ಉಪಾಧ್ಯಕ್ಷೆ ಶೋಭಾ ಸುಬ್ಬಯ್ಯ, ದಾನಿ ವೇಣು ಅತಿಥಿಗಳಾಗಿದ್ದರು. ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ಕಿಗ್ಗಾಲು ಗಿರೀಶ್ ವಂದಿಸಿದರು.

ಜಾನಪದ ಪರಿಷತ್‍ನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಕಾರ್ಯದರ್ಶಿ ಉಜ್ವಲ್ ರಂಜಿತ್, ಉಪಾಧ್ಯಕ್ಷೆ ಶೋಭಾ ಸುಬ್ಬಯ್ಯ, ದಾನಿ ವೇಣು ಮತ್ತಿತರರು ಹಾಡಿನ ಮೂಲಕ ಶಿಬಿರಾರ್ಥಿಗಳನ್ನು ರಂಜಿಸಿದರು.