ಸೋಮವಾರಪೇಟೆ, ಅ. 5: ನೆಹರು ಯುವ ಕೇಂದ್ರ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಎನ್‍ಎಸ್‍ಎಸ್ ಘಟಕ, ಮಡಿಕೇರಿ ತಾಲೂಕು ಯುವ ಒಕ್ಕೂಟಗಳ ಸಹಯೋಗ ದೊಂದಿಗೆ ಆಯೋಜಿಸಲಾಗಿದ್ದ ಸ್ವಚ್ಛ ಭಾರತ್ ಆಂದೋಲನದ ‘ಸ್ವಚ್ಛ ಸಂಕಲ್ಪದಿಂದ ಸ್ವಚ್ಛ ಸಿದ್ಧಿ’ ಸ್ಪರ್ಧೆಯಲ್ಲಿ ಇಲ್ಲಿನ ಸಂತ ಜೋಸೆಫರ ಕಾಲೇಜಿನ ವಿದ್ಯಾರ್ಥಿಗಳು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಜಿಲ್ಲಾ ಮಟ್ಟದ ವಿವಿಧ ವಿಭಾಗಗಳ ಪ್ರಬಂಧ ಸ್ಪರ್ಧೆಯಲ್ಲಿ ಸಂತ ಜೋಸೆಫರ ಕಾಲೇಜಿನ ಫ್ಲೇವಿಯ ಅನುಷ ಮಾರ್ಟಿಸ್ ದ್ವಿತೀಯ ಬಹುಮಾನ (ಪ್ರಶಸ್ತಿ ಪತ್ರದೊಂದಿಗೆ ರೂ. 3 ಸಾವಿರ), ಎಂ. ಅಕ್ಷಿತಾ ತೃತೀಯ ಬಹುಮಾನ (ಪ್ರಶಸ್ತಿ ಪತ್ರದೊಂದಿಗೆ ರೂ. 2 ಸಾವಿರ) ಪಡೆದಿದ್ದು, ಕಾಲೇಜಿನ ಪ್ರಾಂಶುಪಾಲ ಫಾ. ಟೆನ್ನಿ ಕುರಿಯನ್ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.