ಕುಶಾಲನಗರ, ಅ. 8 : ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿಗಳು ಸ್ವಚ್ಚತಾ ಅಭಿಯಾನ ಅಂಗವಾಗಿ ಕಾಲೇಜಿನ ಬಳಿ ಶ್ರಮದಾನ ಕಾರ್ಯಕ್ರಮ ನಡೆಸಿದರು.

ಕಾವೇರಿ ಸ್ವಚ್ಚತಾ ಆಂದೋಲನ ಸಂಚಾಲಕ ಎಂ.ಎನ್. ಚಂದ್ರಮೋಹನ್ ಶ್ರಮದಾನಕ್ಕೆ ಚಾಲನೆ ನೀಡಿದರು. ಕಾಲೇಜು ಆವರಣದ ಹೊರಭಾಗದ ಹೆದ್ದಾರಿ ರಸ್ತೆ ಬದಿಯಲ್ಲಿ ಬೆಳೆದು ನಿಂತಿದ್ದ ಪೊದೆಗಳನ್ನು ಘಟಕದ ಅಧಿಕಾರಿ ಪ್ರಸಾದ್ ಸಾಲ್ಯಾನ್ ನೇತೃತ್ವದಲ್ಲಿ ಶಿಬಿರದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾಲೇಜಿನ ಆಡಳಿತಾಧಿಕಾರಿ ಲಿಂಗರಾಜ್ ಹಾಗೂ ಇತರರು ಹಾಜರಿದ್ದರು.