ಕುಶಾಲನಗರ, ಅ. 8: ಕುಶಾಲನಗರ ಹೋಬಳಿ ನಿವೃತ್ತ ಸರಕಾರಿ ನೌಕರರ ಸಂಘದ 2016-17ನೇ ಸಾಲಿನ ವಾರ್ಷಿಕ ಮಹಾಸಭೆ ಸ್ಥಳೀಯ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಡಿ.ಕೆ. ಬೊಮ್ಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಆರಂಭದಲ್ಲಿ ನಿಧನ ಹೊಂದಿದ ಸದಸ್ಯರಿಗೆ ಸಂತಾಪ ಸೂಚಿಸಲಾಯಿತು. ನಿವೃತ್ತ ತಹಶೀಲ್ದಾರ್ ಟಿ.ಸಿ. ತಮ್ಮಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಸಂಘದ ನಿರ್ದೇಶಕ ಎಸ್.ಎಸ್. ಸಣ್ಣಯ್ಯ ಸಂಘದ ವಾರ್ಷಿಕ ವರದಿ ವಾಚಿಸಿದರು. ಕಾರ್ಯಕ್ರಮದಲ್ಲಿ ಸಂಘದ 20 ಹಿರಿಯ ಸದಸ್ಯರನ್ನು ಗೌರವಿಸಲಾಯಿತು. ಸಂಘದ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.

ಮಹಾಸಭೆಯಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಟಿ.ಆರ್. ಶರವಣಕುಮಾರ್, ನಿವೃತ್ತ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ಎಂ. ಮಹಮ್ಮದ್, ಕುಶಾಲನಗರ ಹೋಬಳಿ ಸಂಘದ ಉಪಾಧ್ಯಕ್ಷ ಕೆ.ಜಿ. ಉತ್ತಪ್ಪ, ಖಜಾಂಚಿ ರಾಮಯ್ಯ, ಕಾರ್ಯದರ್ಶಿ ಪೊನ್ನಪ್ಪ, ಜಂಟಿ ಕಾರ್ಯದರ್ಶಿ ರಾಣು ಅಪ್ಪಣ್ಣ, ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರಬಾಬು, ನಿವೃತ್ತ ಮುಖ್ಯ ಶಿಕ್ಷಕರು ಹಾಗೂ ಸಲಹೆಗಾರ ಎಂ.ಹೆಚ್. ನಜೀರ್ ಅಹಮ್ಮದ್ ಮತ್ತಿತರರು ಇದ್ದರು.