ಸಿದ್ದಾಪುರ, ಅ.11 : ಸಿದ್ದಾಪುರದ ಕೈರಾಳಿ ಸಮಾಜದ 10ನೇ ವರ್ಷದ ಓಣಂ ಆಚರಣೆ ಕಾರ್ಯಕ್ರಮವು ತಾ. 12ರಂದು (ಇಂದು) ಸಿದ್ದಾಪುರದ ಸ್ವರ್ಣಮಾಲ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 9 ಗಂಟೆಯಿಂದ ಹೂವಿನ ರಂಗೋಲಿ (ಪೂಕಳಂ) ಸ್ಪರ್ದೆ ನಡೆಯಲಿದೆ. ಬಳಿಕ ಮಹಾಬಲಿ ಚಕ್ರವರ್ತಿಯನ್ನು ಸ್ವಾಗತಿಸಿ ಕರೆತರುವದು. ನಂತರ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಹಾಗೂ ಪುರುಷರಿಗೆ ರಸಮಯ ಕ್ರೀಡಾ ಸ್ಪರ್ಧೆಗಳು, ನಂತರ ಸಿಂಗಾರಿ ಮೇಳಂ ನಡೆಯಲಿದೆ.

ಪೂರ್ವಾಹ್ನ 11:30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಾಪುರ ಕೈರಾಳಿ ಸಮಾಜದ ಅಧ್ಯಕ್ಷ ಕೆ.ಕೆ. ಶ್ರೀನಿವಾಸ್ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಶಕ್ತಿ ದಿನ ಪತ್ರಿಕೆಯ ಪ್ರಧಾನ ಸಂಪಾದಕರಾದ ಜಿ. ರಾಜೇಂದ್ರ, ಕೊಡಗು ಜಿಲ್ಲಾ ಪ್ರೆಸ್‍ಕ್ಲಬ್ ಹಾಗೂ ಪತ್ರಕರ್ತರ ಸಂಘದ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಜಿ.ಪಂ. ಸದಸ್ಯೆ ಸರಿತಾ ಪೂಣಚ್ಚ, ತಾ.ಪಂ.ಸದಸ್ಯ ಕೆ.ಎಂ. ಜನೀಶ್, ಗ್ರಾ.ಪಂ ಅಧ್ಯಕ್ಷ ಎಂ.ಕೆ. ಮಣಿ, ಓಣಂ ಆಚರಣಾ ಸಮಿತಿಯ ಅಧ್ಯಕ್ಷ ವಿ.ಕೆ. ಲೋಕೇಶ್ ಉಪಸ್ಥಿತರಿ ರುವರು. ಓಣಂ ಸದ್ಯ (ಸಾಮೂಹಿಕ ಬೋಜನ) ಏರ್ಪಡಿಸಲಾಗಿದೆ. ನಂತರ ಮಧ್ಯಾಹ್ನ 2 ಗಂಟೆಗೆ ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮಗಳು, ಸಂಜೆ ಕೇರಳ ರಾಜ್ಯದ ಪ್ರಖ್ಯಾತ ತಂಡದಿಂದ ಗ್ರಾಮೀಣ ಹಾಡು ಹಾಗೂ ನೃತ್ಯ ಪ್ರದರ್ಶನ ನಡೆಯಾಲಿದೆ.