ಸೋಮವಾರಪೇಟೆ, ಅ. 11: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮೀಪದ ಅಬ್ಬೂರುಕಟ್ಟೆಯ ಸ.ಹಿ.ಪ್ರಾ. ಶಾಲಾ ಆವರಣದಲ್ಲಿ ಫಲಾನುಭವಿಗಳಿಗೆ ಕೃಷಿ ಅನುದಾನ ವಿತರಣೆ ಮತ್ತು ಸೋಮವಾರಪೇಟೆ ವಲಯದ 301ನೇ ಸ್ವಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಅಬ್ಬೂರುಕಟ್ಟೆ ಗ್ರಾಮದ ಪ್ರಗತಿಪರ ಕೃಷಿಕ ಹಾಗೂ ತಾ.ಪಂ. ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ ಕಾರ್ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷ ತಿಮ್ಮಯ್ಯ ವಹಿಸಿದ್ದರು.

ಸೋಮವಾರಪೇಟೆ ವಲಯದ ಮೇಲ್ವಿಚಾರಕ ರಮೇಶ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೃಷಿ ವಲಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ರೈತರಿಗೆ ಸಹಾಯಧನ, ವಿವಿಧ ತರಬೇತಿ, ಅಧ್ಯಯನ ಪ್ರವಾಸ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಅಜಿತ್‍ಕುಮಾರ್, ರತ್ನಕುಮಾರ್, ಮೋಹನಾಕ್ಷಿ, ಶಶಿಕುಮಾರ್, ಸೇವಾಪ್ರತಿನಿಧಿ ಶೈಲಾ ಸೇರಿದಂತೆ ಇತರರು ಹಾಜರಿದ್ದರು.