ಮಡಿಕೇರಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೊಡಗು ಪ್ರಾದೇಶಿಕ ಕಚೇರಿ ವತಿಯಿಂದ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಿಜ್ಞಾನ ಪರಿಷತ್ತು ಸಂಯುಕ್ತಾಶ್ರಯದಲ್ಲಿ ಸಂಘಟಿಸಿರುವ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ‘ಪರಿಸರಸ್ನೇಹಿ ದೀಪಾವಳಿ ಆಚರಣೆ’ ಕುರಿತು ಜನಜಾಗೃತಿ ಕಾರ್ಯಕ್ರಮವು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಘಟಕ ಹಾಗೂ ಇಕೋ ಕ್ಲಬ್ ಆಶ್ರಯದಲ್ಲಿ ತಾ. 13 ರಂದು (ಇಂದು) ಅಪರಾಹ್ನ 2.45ಕ್ಕೆ ನಡೆಯಲಿದೆ. ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ