ಒಡೆಯನಪುರ,ಅ. 13: ವಿಯೇಟ್ನಾಂನಿಂದ ಕಳಪೆ ಗುಣಮಟ್ಟದ ಕರಿಮೆಣಸು ಆಮದು ಮಾಡುತ್ತಿರುವ ಕ್ರಮದ ವಿರುದ್ಧ ಶನಿವಾರಸಂತೆ ಹೋಬಳಿ ಕಾಫಿ ಬೆಳೆಗಾರರ ಸಂಘ ಮತ್ತು ಶನಿವಾರಸಂತೆ ರೋಟರಿ ಕ್ಲಬ್ ವತಿಯಿಂದ ತಾ. 14 ರಂದು (ಇಂದು) ಪ್ರತಿಭಟನೆ ನಡೆಸುವದಾಗಿ ಬೆಳೆಗಾರರ ಸಂಘದ ಪ್ರಕಟಣೆ ತಿಳಿಸಿದೆ.

ವಿಯೇಟ್ನಾಂ ಕರಿಮೆಣಸು ಆಮದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಫಿ ಬೆಳೆಗಾರರು ಮತ್ತು ರೋಟರಿ ಸಂಸ್ಥೆಯ ಪದಾಧಿಕಾರಿಗಳು ಮತ್ತು ರೈತರು ಶನಿವಾರ ಬೆಳಿಗ್ಗೆ 10.30 ಕ್ಕೆ ಗುಡುಗಳಲೆ ಜಂಕ್ಸನ್ ನಿಂದ ಪಟ್ಟಣದ ಕೆಆರ್‍ಸಿ ವೃತ್ತದ ವರೆಗೆ ಪ್ರತಿಭಟನೆ ಮೆರವಣಿಗೆಯನ್ನು ನಡೆಸಿ ಈ ಕುರಿತು ಜಿಲ್ಲಾಡಳಿತಕ್ಕೆ ಮನವಿ ನೀಡಲಾಗುತ್ತದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.