ಸಿದ್ದಾಪುರ, ಅ. 14: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಡವರಿಗೆ ಉಚಿತ ಅಕ್ಕಿ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳನ್ನು ಸಹಿಸದ ಬಿ.ಜೆ.ಪಿ ಚುನಾವಣೆಯ ದೃಷ್ಟಿಯಿಂದ ವಿನಾಕಾರಣ ಆರೋಪವನ್ನು ಮಾಡುತ್ತಿರುವದು ಖಂಡನೀಯ ಎಂದು ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೆಜಿತ್ ಕುಮಾರ್ ಗುಹ್ಯ ಆರೋಪಿಸಿದ್ದಾರೆ.

ರಾಜ್ಯ ಸರಕಾರವು ಅನ್ನಭಾಗ್ಯ, ಕ್ಷೀರ ಭಾಗ್ಯ, ಸಾಲ ಮನ್ನ ಸೇರಿದಂತೆ ಬಡವರಿಗೆ ಉಪಯೋಗವಾಗುವ ನೂರಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಜನಪರ ಕೆಲಸವನ್ನು ಮಾಡುತ್ತಿದೆ. ಆದರೇ ಇದನ್ನು ಸಹಿಸದ ಬಿ.ಜೆ.ಪಿ. ಸಂಸದರು ಹಾಗೂ ಶಾಸಕರು ಅನಗತ್ಯವಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.