ಗೋಣಿಕೊಪ್ಪಲು, ಅ. 15: ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಇಲ್ಲಿನ ಮುತ್ತಣ್ಣ ಬಡಾವಣೆ ಮನೆಗಳಲ್ಲಿ ಕಾಂಗ್ರೆಸ್ ಪರ ಜಾಗೃತಿಗೆ ಚಾಲನೆ ನೀಡಲಾಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ, ಗೋಣಿಕೊಪ್ಪ ನಗರ ಅಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ, ಮಹಿಳಾ ಘಟಕ ಅಧ್ಯಕ್ಷೆ ಕಡೇಮಾಡ ಕುಸುಮ ಜೋಯಪ್ಪ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಇವರುಗಳು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತೀರ ಧರ್ಮಜ, ಗೋಣಿಕೊಪ್ಪ ನಗರ ಅಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ, ಮಹಿಳಾ ಘಟಕ ಅಧ್ಯಕ್ಷೆ ಕಡೇಮಾಡ ಕುಸುಮ ಜೋಯಪ್ಪ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಇವರುಗಳು ಮಾಹಿತಿ ಪಡೆಯುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ಬ್ಲಾಕ್ ಕಾರ್ಯದರ್ಶಿ ಎ. ಜೆ. ಬಾಬು, ನಗರ ಕಾರ್ಯದರ್ಶಿ ಸಲಾಂ, ಪಕ್ಷದ ಪ್ರಮುಖರುಗಳಾದ ಅಜಿತ್ ಅಯ್ಯಪ್ಪ, ಮಂಜುಳ, ಮಂಜುನಾಥ್, ಅನೀಶ್ ಮತ್ತಿತರರು ಇದ್ದರು.