ಸುಂಟಿಕೊಪ್ಪ, ಅ.15: ಕಾವೇರಿ ತಾಲೂಕು ರಚನಾ ಹೋರಾಟ ಸಮಿತಿಯ ಕಂಬಿಬಾಣೆ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿ ಡಾ.ಶಶಿಕಾಂತರೈ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಜಿ.ಜವಹಾರ್ ಅವರನ್ನು ನೇಮಕಗೊಳಿಸಲಾಯಿತು . ಕೆದಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾವೇರಿ ತಾಲೂಕು ಹೋರಾಟ ಸಮಿತಿಯ ಅಧ್ಯಕ್ಷ ವಿ.ಪಿಶಶಿಧರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಿತಿಗೆ ಕಾರ್ಯಾಧ್ಯಕ್ಷರಾಗಿ ಸಿ.ಎ.ಮೊೈದು ಗೌರವಧ್ಯಕ್ಷರಾಗಿ ಎ.ಆರ್.ಪಳಂಗಪ್ಪ, ಹಿರಿಯ ಉಪಾಧ್ಯಕ್ಷರುಗಳಾಗಿ ಚಂದ್ರಹಾಸರೈ ಹಾಗೂ ಇತರ ಪದಾಧಿಕಾರಿಗಳ ಸಹಿತ ಸದಸ್ಯರುಗಳಾಗಿ 33 ಮಂದಿಯನ್ನು ಆಯ್ಕೆಗೊಳಿಸಲಾಯಿತು.