ಮಡಿಕೇರಿ, ಅ. 15: ಮದೆ ಗ್ರಾಮ ಪಂಚಾಯಿತಿ, ನೇತಾಜಿ ಯುವಕ ಹಾಗೂ ಯುವತಿ ಮಂಡಳಿ, ನೆಹರೂ ಯುವ ಕೇಂದ್ರ, ತಾಲೂಕು ಯುವ ಒಕ್ಕೂಟ ಮುಂತಾದ ಸಂಘ ಸಂಸ್ಥೆಗಳಿಂದ ಇಂದು ಮದೆ ಗ್ರಾ.ಪಂ. ವ್ಯಾಪ್ತಿಯ ಮಂಗಳೂರು, ಭಾಗಮಂಡಲ ಹೆದ್ದಾರಿಗಳಲ್ಲಿ ಸ್ವಚ್ಛತಾ ಕಾರ್ಯದೊಂದಿಗೆ ಶ್ರಮದಾನ ಕೈಗೊಳ್ಳಲಾಯಿತು.ಜಿಲ್ಲಾ ಪೊಲೀಸ್ ಅಧೀಕ್ಷಕ ಪಿ. ರಾಜೇಂದ್ರ ಪ್ರಸಾದ್, ನಗರಸಭಾ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಅನೇಕ ಪ್ರಮುಖರು, ಪ್ರತಿನಿಧಿಗಳು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.