*ಗೋಣಿಕೊಪ್ಪಲು, ಅ. 17 : ಕೃಷಿ ಉತ್ಪನ್ನ ಮಾರುಕಟ್ಟೆ ವತಿಯಿಂದ ನಿರ್ಮಿಸಿದ ತಿತಿಮತಿ ಕೃಷಿ ಪತ್ತಿನ ಸಹಕಾರ ಸಂಘದ ಮರೂರು ನೂತನ ಗೋದಾಮನ್ನು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು.

ಎಂ.ಆರ್.ಐಡಿ.ಎಫ್ ಅನುದಾನದಲ್ಲಿ 25 ಲಕ್ಷ ವೆಚ್ಚದಲ್ಲಿ 150 ಮೆಟ್ರಕ್ ಟನ್ ಸಾಮಥ್ರ್ಯದ ರೂರಲ್ ಗೋದಾಮನ್ನು ಉದ್ಘಾಟಿಸಿ ಮಾತನಾಡಿದ ಅವರು ಈ ಭಾಗದ ರೈತರ ಅನುಕೂಲಕ್ಕಾಗಿ ನೂತನ ಗೋದಾಮನ್ನು ಆರ್.ಎಂ.ಸಿ. ವತಿಯಿಂದ ನಿರ್ಮಿಸಲಾಗಿದೆ. ಇದರ ಸದುಪಯೋಗವನ್ನು ಸ್ಥಳೀಯ ರೈತರು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ, ತಾಲೂಕು ಬಿಜೆಪಿ ಅಧ್ಯಕ್ಷ ಅರುಣ್ ಭೀಮಯ್ಯ, ತಿತಿಮತಿ ಸ್ಥಾನೀಯ ಸಮಿತಿ ಅಧ್ಯಕ್ಷ ಅನೂಪ್, ಜಿಲ್ಲಾ ವ್ಯಾಪಾರೋದ್ಯಮದ ಪ್ರಕೋಷ್ಠದ ಅಧ್ಯಕ್ಷ ಗಿರೀಶ್ ಗಣಪತಿ, ಆರ್‍ಎಂಸಿ ಅಧ್ಯಕ್ಷ ಸುವಿನ್ ಗಣಪತಿ, ಸದಸ್ಯ ವಿನು ಚಂಗಪ್ಪ, ಮೋಹನ್‍ರಾಜ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕಾಂತಿ ಸತೀಶ್, ಆರ್.ಎಂ.ಸಿ. ಮಾಜಿ ಅಧ್ಯಕ್ಷ ಎಂ.ಹೆಚ್. ದೇವಯ್ಯ, ವಿ.ಎಸ್.ಎಸ್.ಎನ್ ಅಧ್ಯಕ್ಷ ಚೆಪ್ಪುಡೀರ ರಾಮಕೃಷ್ಣ, ಉಪಾಧ್ಯಕ್ಷ ಮನು ನಂಜಪ್ಪ, ವ್ಯವಸ್ಥಾಪಕ ವಿ.ಎಸ್. ಸುಬ್ರಮಣಿ, ಪ್ರಮುಖರಾದ ದರ್ಶನ್, ತಾಲೂಕು ಫೆಡರೇಷನ್ ಉಪಾಧ್ಯಕ್ಷ ಮಧು ದೇವಯ್ಯ ಮೊದಲಾದವರು ಇದ್ದರು. -ಚಿತ್ರ, ವರದಿ : ಎನ್.ಎನ್. ದಿನೇಶ್