ಕುಶಾಲನಗರ, ಅ. 17 : ಕಾವೇರಿ ತಾಲೂಕು ರಚನೆಯ ಬೇಡಿಕೆ ಮುಂದಿಟ್ಟುಕೊಂಡು ಕಾವೇರಿ ತಾಲೂಕು ರಚನಾ ಹೋರಾಟ ಕೇಂದ್ರೀಯ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಸರಣಿ ಸತ್ಯಾಗ್ರಹ ಮಂಗಳವಾರ ಮೂರನೇ ದಿನಕ್ಕೆ ಕಾಲಿರಿಸಿದೆ. ಸ್ಥಳೀಯ ಕಾರು ನಿಲ್ದಾಣದ ಶ್ರೀ ಗುಂಡೂರಾವ್ ಸತ್ಯಾಗ್ರಹ ವೇದಿಕೆಯಲ್ಲಿ ನಡೆಯುತ್ತಿರುವ ನಿರಂತರ ನಿರಶನ ಕರ್ನಾಟಕ ದಲಿತ ಸಂಘರ್ಷ ಸಮಿತಿ, ದಲಿತ ಹಿತರಕ್ಷಣಾ ವೇದಿಕೆ ಸೇರಿದಂತೆ ಕುಶಾಲನಗರ ವ್ಯಾಪ್ತಿಯ ದಲಿತ ಸಂಘಟನೆಗಳು ನಿರಶನ ನಡೆಸಿದವು.

ದಲಿತ ಹಿತರಕ್ಷಣಾ ವೇದಿಕೆ ಸಂಚಾಲಕ ಬಿ.ಡಿ.ಅಣ್ಣಯ್ಯ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಬಿ. ರಾಜು, ತಾಲೂಕು ಹೋರಾಟ ಕೇಂದ್ರೀಯ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ದಲಿತ ಸಂಘಟನೆಗಳ ಪ್ರಮುಖರಾದ ಹೆಚ್.ಕೆ. ಸ್ವಾಮಿ, ಬಸವರಾಜು, ಕೆ.ಎಲ್. ನಾಗರಾಜ್, ಮಹೇಶ್, ಇಬ್ರಾಹಿಂ, ಜೀವನ್, ಅರುಣ್, ಕೃಷ್ಣ, ಹೋರಾಟ ಸಮಿತಿ ಪ್ರಮುಖರಾದ ಜಿ.ಎಲ್. ನಾಗರಾಜ್, ಎಂ.ವಿ. ನಾರಾಯಣ, ಪಂಚಾಯ್ತಿ ಸದಸ್ಯರುಗಳಾದ ಪ್ರಮೋದ್ ಮುತ್ತಪ್ಪ, ಫಜಲುಲ್ಲಾ ಮತ್ತಿತರರು ಪಾಲ್ಗೊಂಡಿದ್ದರು.