ಸಿದ್ದಾಪುರ, ಅ. 17: ನೆಲ್ಯಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದ ಸಭಾಂಗಣ ನಿರ್ಮಾಣಕ್ಕೆ ಅನುದಾನ ನೀಡಿದ ಸಂಸದ ಪ್ರತಾಪ್ ಸಿಂಹ ಹಾಗೂ ರಸ್ತೆ ಕಾಮಗಾರಿಗೆ ಅನುದಾನ ಒದಗಿಸಿದ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರಿಗೆ ನೆಲ್ಯಹುದಿಕೇರಿ ಬಿ.ಜೆ.ಪಿ. ಸಮಿತಿ ಹಾಗೂ ಮುತ್ತಪ್ಪ ದೇವಾಲಯದ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭ ಶ್ರೀ ಮುತ್ತಪ್ಪ ದೇವಾಲಯದ ಸಮುದಾಯ ಭವನದ ಸಭಾಂಗಣ ವನ್ನು ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ದೇವಾಲಯ ಸಮಿತಿ ಅಧ್ಯಕ್ಷ ಪಾಲಚಂಡ ಚೀಯಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ ಲೋಕೇಶ್, ದಾನಿಗಳಾದ ಸೇದುರಾಮನ್ ಚೆಟ್ಟಿಯರ್, ಸ್ಥಾನೀಯ ಸಮಿತಿ ಅಧ್ಯಕ್ಷ ಶಾಜಿ, ಪಕ್ಷದ ಮುಖಂಡರಾದ ಪಿ.ಸಿ. ಅಚ್ಚಯ್ಯ, ನೇಮಿರಾಜ್ ಸೇರಿದಂತೆ ಇನ್ನಿತರರು ಇದ್ದರು.