ವೀರಾಜಪೇಟೆ, ಅ.17: ಚನ್ನಯ್ಯನಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಇತ್ತೀಚೆಗೆ ಗ್ರಾಮಸ್ಥರು ಹಾಗೂ ಸಾರ್ವಜನಿಕರಿ ಗಾಗಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರದಲ್ಲಿ ಮಗ್ಗುಲದ ಕೊಡಗು ದಂತ ವೈದ್ಯ ಕಾಲೇಜಿನ ಡಾ. ಪೂಜಾ ಹಾಗೂ ಡಾ ಅನನ್ಯ ಕಾರ್ಯ ನಿರ್ವಹಿಸಿ 37 ಮಂದಿಗೆ ದಂತ ಪರೀಕ್ಷೆ ಮಾಡಿ ಚಿಕಿತ್ಸೆ ನೀಡಿದರು. ಶಿಬಿರದಲ್ಲಿ ಎಂ.ಡಿ.ಅರುಣ್, ಜಯ ಕರ್ನಾಟಕ ಸಂಘಟನೆಯ ತಾಲೂಕು ಸಮಿತಿಯ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ಶಬೀರ್, ತಾಲೂಕು ಸಮಿತಿ ಅಧ್ಯಕ್ಷ ಅನಿಲ್ ಅಯ್ಯಪ್ಪ, ಉಪಾಧ್ಯಕ್ಷ ಸುನು ಸುಬ್ಬಯ್ಯ ಮತ್ತಿತರರು ಹಾಜರಿದ್ದರು.