ಮಡಿಕೇರಿ, ಅ. 20: ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ನಗರದ ಪ್ರವಾಸಿ ಕೇಂದ್ರ ಗದ್ದಿಗೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಅಲ್ಲಿನ ಪ್ರವಾಸಿ ಕೇಂದ್ರ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರು ಹಾಗೂ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪೌರಾಯುಕ್ತೆ ಬಿ. ಶುಭ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ದೇವಕಿ, ನಿಲಯ ಮೇಲ್ವಿಚಾರಕರು ಇತರರು ಇದ್ದರು.

ಬಳಿಕ ಹಿಂದುಳಿದ ವರ್ಗದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ಶುಚಿತ್ವ ಸಂಬಂಧಿಸಿದಂತೆ ಪರಿಶೀಲನೆ ಮಾಡಿದರು.