ಒಡೆಯನಪುರ, ಅ. 19: ಕರ್ನಾಟಕ ಜಾನಪದ ಪರಿಷತ್ತಿನ ಶನಿವಾರಸಂತೆ ಹೋಬಳಿ ಘಟಕದ ಉದ್ಘಾಟನಾ ಸಮಾರಂಭ ತಾ. 21 ರಂದು ಬೆಳಿಗ್ಗೆ 10.30 ಗಂಟೆಗೆ ಶನಿವಾರಸಂತೆ ಸುಪ್ರಜಗುರುಕುಲ ವಿದ್ಯಾಸಂಸ್ಥೆಯ ಪ್ರಾಂಗಣದಲ್ಲಿ ನಡೆಯಲಿದೆ.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಜಿ. ಅನಂತಶಯನ ವಹಿಸಲಿದ್ದು ಕಾರ್ಯಕ್ರಮವನ್ನು ಜಿ.ಪಂ.ಸದಸ್ಯೆ ಸರೋಜಮ್ಮ ಉದ್ಘಾಟಿಸುವರು. ಘಟಕದ ಉದ್ಘಾಟನೆಯನ್ನು ತಾಲೂಕು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಚಂದ್ರಮೋಹನ್ ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಹೋಬಳಿ ಜಾನಪದ ಪರಿಷತ್ ಅಧ್ಯಕ್ಷೆ ಡಿ. ಸುಜಲದೇವಿ, ತಾಲೂಕು ಪಂಚಾಯಿತಿ ಸದಸ್ಯ ಬಿ.ಎಸ್. ಅನಂತ್‍ಕುಮಾರ್, ಶನಿವಾರಸಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮದ್‍ಗೌಸ್, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್, ಚೇಂಬರ್ ಅಧ್ಯಕ್ಷ ಬಿ.ಎಸ್.ಪ್ರತಾಪ್, ರೋಟರಿ ಸಂಸ್ಥೆ ಅಧ್ಯಕ್ಷ ಎಚ್.ಎಸ್. ವಸಂತ್, ಶನಿವಾರಸಂತೆ ಪ್ರತ್ರಕರ್ತರ ಸಂಘದ ಅಧ್ಯಕ್ಷ ಎಚ್.ಆರ್. ಹರೀಶ್, ಲೇಖಕಿ ಶ.ಗ. ನಯನತಾರ ಮುಂತಾದವರು ಭಾಗವಹಿಸುವರು ಎಂದು ಘಟಕದ ಪ್ರಕಟಣೆ ತಿಳಿಸಿದೆ.