ಸೋಮವಾರಪೇಟೆ, ಅ. 20: ಸಮೀಪದ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪಲ್ಲಕ್ಕಿ ಉತ್ಸವ ನಡೆಯಿತು.

ಗ್ರಾಮಸ್ಥರ ಸಮ್ಮುಖದಲ್ಲಿ ರಥಬೀದಿಯಲ್ಲಿ ಮೆರವಣಿಗೆ ನಡೆಯಿತು. ನಂತರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಅರ್ಚಕ ರಮೇಶ್ ಭಟ್ ಪೌರೋಹಿತ್ಯದಲ್ಲಿ ಬೆಳಗ್ಗಿನಿಂದಲೆ ಅರ್ಚನೆ ಸೇರಿದಂತೆ ವಿವಿಧ ಪೂಜೆಗಳು ನಡೆದವು. ಮಧ್ಯಾಹ್ನದ ನಂತರ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಜಿ. ಮೇದಪ್ಪ, ಗ್ರಾಮದ ಅಧ್ಯಕ್ಷ ಗಣಪತಿ, ಪ್ರಮುಖರಾದ ಕೆ.ಎಂ. ಲೋಕೇಶ್, ಕೃಷ್ಣಕುಮಾರ್, ರಾಜಶೇಖರ್, ಮನೋಹರ್, ಜೋಯಪ್ಪ, ಕಿರಣ್, ನಿಶಾಂತ್ ಮತ್ತಿತರು ಇದ್ದರು.