ಮಡಿಕೇರಿ, ಅ. 19 : ರಾಜ್ಯ ಸರ್ಕಾರ ಘೋಷಿಸಿರುವ ಟಿಪ್ಪು ಜಯಂತಿ ಆಚರಣೆಯ ನೇತೃತ್ವವನ್ನು ವಹಿಸಬೇಕಿರುವ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆÉಯಲ್ಲಿ ಟಿಪ್ಪು ಜಯಂತಿ ವಿರುದ್ಧ ತೆಗೆದುಕೊಂಡಿರುವ ನಿರ್ಣಯಕ್ಕೆ ಸ್ವತಃ ಜಿಲ್ಲಾಧಿಕಾರಿಗಳೇ ಸಹಿ ಮಾಡಿದರೆ ಈ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವದಾಗಿ ಜಿಲ್ಲಾ ಪಂಚಾಯಿತಿ ಕಾಂಗ್ರೆಸ್ ಸದಸ್ಯೆ ಕೆ.ಪಿ. ಚಂದ್ರಕಲಾ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಲ್ಲಾ ಮಹನೀಯರ ಜಯಂತಿಗಳನ್ನು ಆಚರಿಸುತ್ತಿದ್ದು, ಇದೇ ಪ್ರಕಾರವಾಗಿ ಟಿಪ್ಪು ಜಯಂತಿಯನ್ನು ಕೂಡ ಆಚರಿಸಲಾಗುತ್ತಿದೆ, ಇದರಲ್ಲಿ ತಪ್ಪೇನಿದೆಯೆಂದು ಪ್ರಶ್ನಿಸಿದರು.