ಸೋಮವಾರಪೇಟೆ,ಅ.22: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೋಟಗಳ ಸ್ಪರ್ಧೆಯಲ್ಲಿ ಜಿಲ್ಲೆಯ ಕೂಡಿಗೆ ಕ್ರೀಡಾ ಶಾಲೆಯ ವಿದ್ಯಾರ್ಥಿನಿ ಸಿ.ಎಂ. ರಾಶಿ, 1500 ಮೀಟರ್ ಓಟದ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ಮುಂದಿನ ತಿಂಗಳ 6 ಮತ್ತು 7ರಂದು ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ ಈಕೆಗೆ ಕ್ರೀಡಾ ಶಾಲೆಯ ಅಂತೋಣಿ ಡಿಸೋಜ ಅವರು ತರಬೇತಿ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ರಾಜ್ಯಮಟ್ಟದ 3000 ಮೀಟರ್ ಓಟದ ಸ್ಪರ್ಧೆಯಲ್ಲೂ ಭಾಗವಹಿಸಿರುವ ಈಕೆ ಸೋಮವಾರಪೇಟೆ ಕೂತಿ ಗ್ರಾಮದ ಮಂಜುನಾಥ್ ಮತ್ತು ರೀನಾ ದಂಪತಿ ಪುತ್ರಿ.