ಮಡಿಕೇರಿ, ಅ.22 : ಮನೆ ಮನೆ ಕಡೆಗೆ ಕಾಂಗ್ರೆಸ್ ನಡಿಗೆ ಅಭಿಯಾನ ಇಂದು ನಗರದ ಗದ್ದಿಗೆ ಹಾಗೂ ತ್ಯಾಗರಾಜ ಕಾಲೋನಿ ವ್ಯಾಪ್ತಿಯಲ್ಲಿ ನಡೆಯಿತು. ಕಾಂಗ್ರೆಸ್ ನಗರಾಧ್ಯಕ್ಷರಾದ ಕೆ.ಯು.ಅಬ್ದುಲ್ ರಜಾóಕ್ ಅವರ ನೇತೃತ್ವದಲ್ಲಿ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರಕಾರದ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಟ್ಟರು.

ನಗರ ವ್ಯಾಪ್ತಿಯಲ್ಲಿ ಮನೆ ಮನೆ ಕಡೆಗೆ ಕಾಂಗ್ರೆಸ್ ನಡಿಗೆ ಅಭಿಯಾನಕ್ಕೆ ಉತ್ತಮ ಸ್ಪಂದನೆ ದೊರೆತ್ತಿದೆ ಎಂದು ತಿಳಿಸಿದ ಅಬ್ದುಲ್ ರಜಾóಕ್, ಕಾರ್ಯಕರ್ತರಲ್ಲಿ ಪಕ್ಷದ ಬೆಳವಣಿಗೆ ಬಗ್ಗೆ ಹೆಚ್ಚಿನ ಉತ್ಸಾಹ ಮೂಡಿದೆ ಎಂದರು. ಬಹುತೇಕ ಬಡಾವಣೆಗಳಲ್ಲಿ ಅಭಿಯಾನವನ್ನು ಯಶಸ್ವಿಗೊಳಿಸಿದ್ದು, ಜನರು ಸಮಸ್ಯೆಗಳ ಬಗ್ಗೆಯೂ ಗಮನ ಸೆಳೆಯುತ್ತಿದ್ದಾರೆ ಎಂದು ಅವರು ಹೇಳಿದರು.

ರೇಷ್ಮೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಟಿ.ಪಿ.ರಮೇಶ್, ನಗರಸಭಾ ಅಧ್ಯಕ್ಷರಾದ ಕೂಡಕಂಡಿ ಕಾವೇರಮ್ಮ ಸೋಮಣ್ಣ, ಮೂಡಾ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಮಾಜಿ ಅಧ್ಯಕ್ಷರಾದ ಸುರಯ್ಯಾ ಅಬ್ರಾರ್, ನಗರಸಭಾ ಸದಸ್ಯರಾದ ಜುಲೇಕಾಬಿ, ಪ್ರಕಾಶ್ ಆಚಾರ್ಯ, ವೆಂಕಟೇಶ್, ಉದಯಕುಮಾರ್, ಗಿಲ್ಬರ್ಟ್, ಪ್ರಮುಖರಾದ ಜಫ್ರುಲ್ಲಾ, ಮುನೀರ್ ಮಚಾರ್, ಇಸೂಫ್, ಸದಾ ಮುದ್ದಪ್ಪ, ಪಾರ್ವತಿ, ಸ್ವರ್ಣಲತಾ, ಎಂ.ಎಂ.ಹನೀಫ್, ತೆನ್ನಿರಾ ಮೈನಾ, ಸುನೀಲ್ ನಂಜಪ್ಪ, ಟಿ.ಎಂ.ಅಯ್ಯಪ್ಪ, ಎಂ.ಎ.ಉಸ್ಮಾನ್, ಶಶಿ, ನಸೀಮಾ, ರಾಧ, ಕುಸುಮ, ಕೌಸರ್ ಮತ್ತಿತರ ಪ್ರಮುಖರು ಈ ಸಂದರ್ಭ ಹಾಜರಿದ್ದರು.