ಸೋಮವಾರಪೇಟೆ,ಅ.24: ರಾಜ್ಯ ಬಾಲಭವನ ಸಮಿತಿ ಹಾಗೂ ತಾಲೂಕು ಬಾಲಭವನ ಸಮಿತಿ ವತಿಯಿಂದ ತಾ. 26ರಂದು ತಾಲೂಕು ಪಂಚಾಯಿತಿ ಆವರಣದಲ್ಲಿರುವ ಸ್ತ್ರೀ ಶಕ್ತಿ ಭವನದಲ್ಲಿ 9 ರಿಂದ 16ರ ವಯೋಮಾನದೊಳಗಿನ ವಿದ್ಯಾರ್ಥಿಗಳಿಗೆ ಕಲಾಶ್ರೀ ಆಯ್ಕೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಸೃಜನಾತ್ಮಕ ಕಲೆ (ಚಿತ್ರ ಕಲೆ, ಕರಕುಶಲ, ಜೇಡಿ ಮಣ್ಣಿನ ಕಲೆ) ಸೃಜನಾತ್ಮಕ ಬರವಣಿಗೆ (ಕಥೆ, ಕವನ, ಪ್ರಬಂಧ) ಸೃಜನಾತ್ಮಕ ಪ್ರದರ್ಶನ ಕಲೆ (ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ಥಾನಿ ಶಾಸ್ತ್ರೀಯ ನೃತ್ಯ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕಪಾತ್ರಾಭಿನಯ ಇತ್ಯಾದಿ) ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ, ವಿವರಣೆ ಮತ್ತು ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತೀರ್ಪುಗಾರರು ಇನ್ನಿತರರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ.

ಸ್ಪರ್ಧೆಯಲ್ಲಿ ಭಾಗವಹಿಸುವವರು ತಾ. 26ರ ಬೆಳಿಗ್ಗೆ 9.30ಕ್ಕೆ ಸ್ಥಳದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸುವಂತೆ ಅಥವಾ ದೂ. 08276-282281ನ್ನು ಸಂಪರ್ಕಿಸುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.