ಕುಶಾಲನಗರ, ಅ. 25: ಇಲ್ಲಿಗೆ ಸಮೀಪದ ಚಿಕ್ಕ ಅಳುವಾರದ ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ಅಧ್ಯಯನ ವಿಭಾಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಮಡಿಕೇರಿ ಸಂಯುಕ್ತ ಆಶ್ರಯದಲ್ಲಿ “ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ” ಕಾರ್ಯಕ್ರಮ ನಡೆಯಿತು. ಮಡಿಕೇರಿಯ ಆರೋಗ್ಯ ಅಧಿಕಾರಿ ಡಾ. ಸುಪರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿzರು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಮನೋಶಾಸ್ತ್ರಜ್ಞ ಎಚ್. ಟಿ. ರಾಜಶೇಖರ್, ಮನೋ ಸಾಮಾಜಿಕ ಕಾರ್ಯಕರ್ತ ಕೆ.ಕೆ. ಶಿವಕುಮಾರ್, ಆರೋಗ್ಯ ನಿರೀಕ್ಷಕÀರಾದ ಶಿವಪ್ರಸಾದ್ ಮತ್ತು ಮಹೇಶ್ ಪಾಲ್ಗೊಂಡಿದ್ದರು. ಉಪನ್ಯಾಸಕ ಎಸ್.ಎಮ್. ನಟರಾಜ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಸಮಾಜ ಕಾರ್ಯ ಅಧ್ಯಯನ ವಿಭಾಗ ಉಪನ್ಯಾಸಕರುಗಳಾದ ಕೆ.ಜೆ. ರಾಬಿನ್, ಹರಿಣಾಕ್ಷಿ ಇದ್ದರು.

ಕಿಶೋರ್‍ಕುಮಾರ್ ಕಾರ್ಯಕ್ರಮ ನಿರೂಪಿಸಿದರು, ಗಾಯತ್ರಿ ಸ್ವಾಗತಿಸಿದರು, ಲೋಕೇಶ್ ಭರಣಿ ವಂದಿಸಿದರು. ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.