ಮಡಿಕೇರಿ, ಅ. 26: ಸರಕಾರದ ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಿರುವ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕುಟ್ಟಪ್ಪ ಜಯಂತಿ ಆಚರಿಸಲು ತೀರ್ಮಾನಿಸಿದೆ. ಟಿಪ್ಪು ಜಯಂತಿ ಸಂದರ್ಭ ಉಂಟಾದ ಗಲಭೆಯಲ್ಲಿ ಮೃತಪಟ್ಟ ಕುಟ್ಟಪ್ಪ ಅವರನ್ನು ಹುತಾತ್ಮರೆಂದು ಪರಿಗಣಿಸಿ ಕುಟ್ಟಪ್ಪ ಜಯಂತಿ ಆಚರಿಸಲಾಗುವದು. ಈಗಾಗಲೇ ಸ್ಥಳ ನಿಗದಿಪಡಿಸಲಾಗಿದ್ದು, ನ. 10ರಂದೇ ಆಚರಣೆ ಮಾಡಲಿದ್ದು, ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವದೆಂದು ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ ತಿಳಿಸಿದ್ದಾರೆ.