ಮಡಿಕೇರಿ, ಅ. 26: ಪ್ರಸಕ್ತ (2017-18ನೇ) ಸಾಲಿನ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಭವನ ವತಿಯಿಂದ ನವೆಂಬರ್ 7 ರಂದು ಮಡಿಕೇರಿ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

5 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ಚಿತ್ರಕಲೆ, ಕನ್ನಡ ಗೀತೆ, ರಂಗೋಲಿ, ವೇಷಭೂಷಣ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಲಾಗುವದು.

ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಕ್ಕಳು ತಾ.

31 ರೊಳಗೆ ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ದೂರವಾಣಿ ಸಂಖ್ಯೆ: 08272-228010, ಮೊ.9535188206, 9611587016 ಇಲ್ಲಿ ಕಚೇರಿ ವೇಳೆಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.