ಮಡಿಕೇರಿ, ಅ. 27: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಭಿಗಿ ಭದ್ರತೆಗಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಪಿ. ರಾಜೇಂದ್ರ ಪ್ರಸಾದ್ ನೇತೃತ್ವಲ್ಲಿ 50 ಮಂದಿ ಕೊಡಗು ಪೊಲೀಸರನ್ನು ನಿಯೋಜಿಸಲಾಗಿದೆ.

ಪ್ರಧಾನಿ ಮೋದಿ ಕ್ಷೇತ್ರ ದರ್ಶನದೊಂದಿಗೆ ವಿಶೇಷ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಕಾರಣ ರಾಜ್ಯ ಪೊಲೀಸ್ ಇಲಾಖೆ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಶಾಂತಿ ಸುವ್ಯವಸ್ಥೆಗೆ ಕಣ್ಗಾವಲು ಇರಿಸಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದಲ್ಲಿ ದಿನ ಮುಂಚಿತವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಜಿಲ್ಲಾ ಪೊಲೀಸ್ ಅಧೀಕ್ಷಕರೊಂದಿಗೆ ಇಬ್ಬರು ಇನ್ಸ್‍ಪೆಕ್ಟರ್‍ಗಳಾದ ಉಮೇಶ್ ಹಾಗೂ ದಿವಾಕರ್ ಸೇರಿದಂತೆ 50 ಸಿಬ್ಬಂದಿ ಕೊಡಗಿನಿಂದ ಕರ್ತವ್ಯಕ್ಕೆ ತೆರಳಿದ್ದಾರೆ.