ಸುಂಟಿಕೊಪ್ಪ, ಅ.29: ಕಾವೇರಿ ತಾಲೂಕಿಗೆ ಆಗ್ರಹಿಸಿ ಸುಂಟಿಕೊಪ್ಪ ಸ್ಥಾನೀಯ ಸಮಿತಿ ವತಿಯಿಂದ ಸಂತೆ ದಿನವಾದ ಇಂದು ಧರಣಿ ಸತ್ಯಾಗ್ರಹ ನಡೆಸಿ ಪಟ್ಟಣದಲ್ಲಿ ತಮಟೆ ಬಾರಿಸುವದರೊಂದಿಗೆ ಕನ್ನಡ ವೃತ್ತದಲ್ಲಿ ಜಾಗೃತಿ ಮೂಡಿಸಲಾಯಿತು.

ಧರಣಿ ನಿರತರನ್ನು ಉದ್ದೇಶಿಸಿ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಎ.ವಸಂತ ಮಾತನಾಡಿದರು.

ಕಾವೇರಿ ತಾಲೂಕು ಹೋರಾಟ ಕೇಂದ್ರ ಸಮಿತಿಯ ಸದಸ್ಯ ಡಿ. ನರಸಿಂಹ, ಮಾಜಿ ಗ್ರಾ.ಪಂ. ಅಧ್ಯಕ್ಷ ಎಂ.ಎ. ಉಸ್ಮಾನ್, ಗೌರವ ಅಧ್ಯಕ್ಷ ಯಂಕನ ಕರುಂಬಯ್ಯ ಮಾತನಾಡಿದರು. ಗ್ರಾ.ಪಂ. ಸೇರಿದಂತೆ ವಿವಿಧ ಸಂಘ- ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.