ಕೂಡಿಗೆ, ಅ. 29: ಕೂಡಿಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯ ಆರಂಭದಲ್ಲೇ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಕೆ.ವೈ.ರವಿ ಮತ್ತು ರಾಮಚಂದ್ರ ಆಕ್ರೋಶ ವ್ಯಕ್ತಪಡಿಸುತ್ತಾ ಹಲವಾರು ಮಾಸಿಕ ಸಭೆಗಳಲ್ಲಿ ಕೂಡಿಗೆ ವ್ಯಾಪ್ತಿಯ ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನಗಳನ್ನು ಹಂಚಲು ಚರ್ಚಿಸಿದ್ದರೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸ್ಪಂದನೆ ಇದುವರೆಗೂ ದೊರೆತಿಲ್ಲ ಎಂದರು.

ಸುದೀರ್ಘ ಚರ್ಚೆಗಳ ನಂತರ ನಿವೇಶನ ರಹಿತರಿಗೆ ಹುದುಗೂರು ಮತ್ತು ಬ್ಯಾಡಗೊಟ್ಟ ಗ್ರಾಮಗಳಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ನಿವೇಶನ ನೀಡುವಂತೆ ಸರ್ವ ಸದಸ್ಯರಿಂದ ಒಕ್ಕೊರಲಿನ ತೀರ್ಮಾನ ಮಾಡಲಾಯಿತು.

ಈ ಸಂದರ್ಭ ಸಭೆಯಲ್ಲಿ 14ನೇ ಹಣಕಾಸಿನ ಕ್ರಿಯಾ ಯೋಜನೆಯನ್ನು ತಯಾರಿಸಲಾಯಿತು ಅಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧÀ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಚರ್ಚಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಮಾತನಾಡಿ ಗ್ರಾ.ಪಂ.ನ ಸರ್ವ ಸದಸ್ಯರುಗಳ ಸಲಹೆ ಸೂಚನೆಗಳಿಗೆ ಅನುಗುಣವಾಗಿ ಕಾಮಗಾರಿಗಳನ್ನು ಕೈಕೊಳ್ಳಲಾಗುವದು. ಮೂಲಭೂತ ಸೌಕರ್ಯಗಳಾದ ಗ್ರಾಮಗಳ ಸುಚಿತ್ವ ಮತ್ತು ಬೀದಿ ದೀಪ, ಕುಡಿಯುವ ನೀರಿನ ಯೊಜನೆಗಳನ್ನು ಕೈಗೆತ್ತಿಕೊಳ್ಳಲಾಗುವದು ಎಂದರು.