ಮಡಿಕೇರಿ, ಅ. 30: ಮಡಿಕೇರಿ ಕೊಡವ ಸಮಾಜ ಹಾಗೂ ಕೊಡವ ಸಮಾಜ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ತಾ. 31ರಂದು (ಇಂದು) ನಗರದ ಕೊಡವ ಸಮಾಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಮೈಸೂರಿನ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಶಿಬಿರ ಆಯೋಜಿಸಲಾಗಿದ್ದು, ಹೃದಯಕ್ಕೆ ಸಂಬಂಧಿಸಿದ, ಉಸಿರಾಟದ ತೊಂದರೆ, ಸ್ತ್ರೀರೋಗ ಹಾಗೂ ಸ್ತನ ಕ್ಯಾನ್ಸರ್ ತಪಾಸಣೆ ನಡೆಸಲಾಗುವದು. ಬೆಳಿಗ್ಗೆ 9ರಿಂದ ಅಪರಾಹ್ನ 3 ಗಂಟೆಯ ತನಕ ಶಿಬಿರ ಕೊಡವ ಸಮಾಜದಲ್ಲಿ ನಡೆಯಲಿದೆ. ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಶಿವಕುಮಾರ್, ಗುಲ್ಜರ್, ಅನಿತಾ ಸೇರಿದಂತೆ ನಾರಾಯಣ ಆಸ್ಪತ್ರೆಯ ತಂಡ ಪಾಲ್ಗೊಳ್ಳಲಿದೆ.

ಬೆಳಿಗ್ಗೆ 9.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೊಡವ ಸಮಾಜದ ಅಧ್ಯಕ್ಷ ಕೊಂಗಾಂಡ ಎಸ್. ದೇವಯ್ಯ, ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ಕನ್ನಂಡ ಕವಿತಾ ಹಾಗೂ ತಜ್ಞ ವೈದ್ಯರುಗಳು ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ 9481431099 ಅಥವಾ 9008159546 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.