ಸೋಮವಾರಪೇಟೆ, ಅ. 30: ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ಸಭೆ ಪತ್ರಿಕಾ ಭವನದಲ್ಲಿ ಸಂಘದ ಅಧ್ಯಕ್ಞ ಸಿ.ಸಿ. ನಂದ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಾರ್ವಜನಿಕರ ಸಹಕಾರದಿಂದ ಪ್ರಸಕ್ತ ಸಾಲಿನ ಆಯುಧ ಪೂಜಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದ್ದು, ಪೂಜಾ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ರೂ. 14.90 ಲಕ್ಷ ವಂತಿಕೆಯಾಗಿ ಬಂದಿದ್ದು, 16 ಲಕ್ಷ ರೂ. ವೆಚ್ಚವಾಗಿದೆ. ಸಂಘದ ಉಳಿತಾಯ ಖಾತೆಯಲ್ಲಿ ರೂ. 9.50 ಲಕ್ಷ ಇರುವದಾಗಿ ತಿಳಿಸಿದರು.

ವೇದಿಕೆಯಲ್ಲಿ ಸಂಘದ ಪದಾಧಿಕಾರಿಗಳಾದ ಪರಮೇಶ್, ಬಾಲಕೃಷ್ಣ ರೈ, ಪ್ರಕಾಶ್, ಚೆನ್ನಪ್ಪ, ಖಾದರ್ ಮತ್ತಿತರರು ಉಪಸ್ಥಿತರಿದ್ದರು.