ಸೋಮವಾರಪೇಟೆ, ಅ. 30: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಎಸ್.ಡಿ. ವಿಜೇತ್ ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್ ಅಧÀ್ಯಕ್ಷತೆಯಲ್ಲಿ ಇಲ್ಲಿನ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ನಿಕಟಪೂರ್ವ ಅಧ್ಯಕ್ಷÀ ಹೆಚ್.ಜೆ. ಜವರಪ್ಪ ಅವರು ಅಧಿಕಾರ ಹಸ್ತಾಂತರಿಸಿದರು.

ನೂತನ ಅಧ್ಯಕ್ಷ ವಿಜೇತ್ ಮಾತನಾಡಿ, ಕನ್ನಡ ಪರ ಚಟುವಟಿಕೆ ಗಳನ್ನು ಹೆಚ್ಚಾಗಿ ನಡೆಸುವದು, ಶಾಲಾ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಕನ್ನಡ ಭಾಷೆಗೆ ಸಂಬಂಧಿಸಿದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸು ವದು, ಸರಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಲಾಗುವದು ಎಂದರು.

ಪದಗ್ರಹಣ ಸಮಾರಂಭದಲ್ಲಿ ಜಿಲ್ಲಾ ಕಾರ್ಯದರ್ಶಿ ಡಾ.ಸುಭಾಶ್ ನಾಣಯ್ಯ, ನಿರ್ದೇಶಕರಾದ ಪ್ರಸನ್ನ, ಜಿಲ್ಲಾ ಕೋಶಾಧಿಕಾರಿ ಎಸ್.ಎ. ಮುರುಳಿಧರ, ಕವನ್ ಕಾರ್ಯಪ್ಪ, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷ ಕುಡೆಕಲ್ ಸಂತೋಷ್, ಜಿಲ್ಲಾ ಸಮಿತಿ ವಿಶೇಷ ಆಹ್ವಾನಿತರಾದ ಸಿದ್ದರಾಜು ಬೆಳ್ಳಯ್ಯ, ಎಸ್.ಡಿ. ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು. ಪದಾಧಿಕಾರಿ ಚಂದ್ರಿಕಾ ಪ್ರಾರ್ಥಿಸಿದರೆ, ಆದಂ ಸ್ವಾಗತಿಸಿದರು.

ಇದೇ ಸಂದರ್ಭ ತಾಲೂಕು ಘಟಕದ ಗೌರವ ಕಾರ್ಯದರ್ಶಿಗಳಾಗಿ ಕೆ.ಎ. ಆದಂ, ಎಲ್.ಎಂ. ಪ್ರೇಮ, ಖಜಾಂಚಿ ಎ.ಪಿ.ವೀರರಾಜು ಮತ್ತು ಸಮಿತಿ ಸದಸ್ಯರುಗಳು ಅಧಿಕಾರ ಸ್ವೀಕÀರಿಸಿದರು.