ಮಡಿಕೇರಿ, ನ. 2: ಗ್ರೀನ್ ಸಿಟಿಫೋರಂ ನೂತನ ಸಂಚಾಲಕರಾಗಿ ಅಂಬೆಕಲ್ ನವೀನ್ ಕುಶಾಲಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣಮೂರ್ತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವೃಂದಾವನ ರೆಸಾರ್ಟ್ ಸಭಾಂಗಣದಲ್ಲಿ ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2017-18ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಖಜಾಂಚಿಯಾಗಿ ಸವಿತಾ ಭಟ್ ಆಯ್ಕೆಯಾಗಿದ್ದಾರೆ. ಸ್ಥಾಪಕಾಧ್ಯಕ್ಷ ಚೈಯ್ಯಂಡ ಸತ್ಯ ಗೌರವಾಧ್ಯಕ್ಷರಾಗಿ ಫೋರಂನಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

ಫೋರಂ ಸದಸ್ಯರಾಗಿ ಕುಕ್ಕೇರ ಜಯ ಚಿಣ್ಣಪ್ಪ, ಮೋಂತಿ ಗಣೇಶ್, ಕಿರಿಯಮಾಡ ರತನ್ ತಮ್ಮಯ್ಯ, ಐತಿಚಂಡ ರಮೇಶ್ ಉತ್ತಪ್ಪ, ಅಜ್ಜಮಾಡ ರಮೇಶ್ ಕುಟ್ಟಪ್ಪ ಕಾರ್ಯನಿರ್ವಹಿಸಲಿದ್ದಾರೆ.

ಜಿಲ್ಲೆಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಲು ಜಿಲ್ಲೆಯ ವಿವಿಧೆಡೆಯಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗುವದು. ಜಾಗೃತಿ ಭಾಗವಾಗಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗುವದೆಂದು ನೂತನ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಹೇಳಿದರು.