ಶನಿವಾರಸಂತೆ, ನ. 2: ಶನಿವಾರಸಂತೆ ಲಯನ್ಸ್ ಕ್ಲಬ್‍ನ ಸಭೆಯು ಶನಿವಾರಸಂತೆ ಭಾರತಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಶನಿವಾರಸಂತೆ ಲಯನ್ಸ್ ಕ್ಲಬ್‍ನ ಅಧ್ಯಕ್ಷ ರವಿಕಾಂತ್ ಎಸ್.ಎಸ್. ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.

ಭಾರತಿ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿ, ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ವಿ. ಜಗದೀಶ್, ಎಸ್.ಎಂ. ಮಹಂತೇಶ್ ಹಾಗೂ ಶಂಕರ್ ಅವರುಗಳನ್ನು ಲಯನ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.

ಡಾ. ಪಲ್ಲವಿ, ಲಯನ್ಸ್ ಕ್ಲಬ್‍ನ ಜಂಟಿ ಕಾರ್ಯದರ್ಶಿ ಎಂ.ಆರ್. ನಿರಂಜನ್, ಲಯನ್ಸ್ ಕ್ಲಬ್‍ನ ಉಪಾಧ್ಯಕ್ಷ ಬಿ.ಸಿ. ಧರ್ಮಪ್ಪ, ಲಯನ್ಸ್ ಕ್ಲಬ್‍ನ ಕಾರ್ಯದರ್ಶಿ, ಬಿ.ಕೆ. ಚಿಣ್ಣಪ್ಪ, ಖಜಾಂಚಿ ಚಂದ್ರಶೇಖರ್ ಉಪಸ್ಥಿತರಿದ್ದರು. ಬಿ.ಕೆ. ಚಿಣ್ಣಪ್ಪ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.