ಮಡಿಕೇರಿ, ನ. 2: ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಬಾಪು ವಿಶ್ವಾಸ ವ್ಯಕ್ತ ಪಡಿಸಿದರು.

ಗೋಣಿಕೊಪ್ಪಲಿನ ಹರಿಶ್ಚಂದ್ರಪುರದ 5ನೇ ವಾರ್ಡ್‍ನಲ್ಲಿ ನಗರ ಕಾಂಗ್ರೆಸ್‍ನ ಅಧ್ಯಕ್ಷ ಅರವಿಂದ್ ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ನಡೆದ ಮನೆ ಮನೆ ಕಡೆಗೆ ಕಾಂಗ್ರೆಸ್ ನಡಿಗೆ ಅಭಿಯಾನದಲ್ಲಿ ಬಾಪು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ವೀರಾಜಪೇಟೆ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ ಮಾತನಾಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷ ಪೂರ್ಣಗೊಳ್ಳುತ್ತಿದೆ ಜನಪರ ಯೋಜನೆಯನ್ನು ಅನುಷ್ಠಾನಗೊಳಿಸಿ ಸಮರ್ಥ ಸರ್ಕಾರ ಎನಿಸಿಕೊಂಡಿದೆ ಎಂದರು.ಅಭಿಯಾನದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರುಗಳಾದ ಕುಲ್ಲಚಂಡ ಪ್ರಮೋದ್ ಗಣಪತಿ, ಶಾಹಿನ್, ಯಾಸ್ಮೀನ್, ಜಿಲ್ಲಾ ಕಾಂಗ್ರೆಸ್‍ನ ಮುಖಂಡರಾದ ವಿ.ಕೆ. ಪೋಕುಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎನ್. ಪ್ರಕಾಶ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ಕಾರ್ಯದರ್ಶಿ ಹುಮಾಯೂನ್ ಪಾಷಾ,ಪಕ್ಷದ ಮುಖಂಡರುಗಳಾದ ಅಬ್ದುಲ್ ಸಮ್ಮದ್,ಮುನೀರ್ ದೇವಿ, ದಸ್ತಗಿರ್, ಮೆಹಬೂಬ್,ಅನೀಶ್, ನಾರಾಯಣ ಸ್ವಾಮಿ ನಾಯ್ಡು, ನಜೀರ್ ಅಹಮ್ಮದ್ ,ಧನಲಕ್ಷ್ಮಿ, ನಗರ ಕಾಂಗ್ರೆಸ್‍ನ ಅಧ್ಯಕ್ಷ ಸೋಮಣ್ಣ, ಕಾರ್ಯದರ್ಶಿ ವಿನೋದ್, ನಗರ ಕಾಂಗ್ರೆಸ್‍ನ ಅಲ್ಪ ಸಂಖ್ಯಾತ ಘಟಕದ ನೂತನ ಅಧ್ಯಕ್ಷ ವಕೀಲ ಎಂ.ಎ. ಸಮೀರ್, ಮುಂತಾದವರು ಭಾಗವಹಿಸಿದ್ದರು.