ಸೋಮವಾರಪೇಟೆ, ನ. 4: ಪಟ್ಟಣದ ರೇಂಜರ್ಸ್ ಬ್ಲಾಕ್‍ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ವಲಯ ಸೇವಾ ಕೇಂದ್ರದ ನೂತನ ಕಚೇರಿ ಉದ್ಘಾಟನೆ ನಡೆಯಿತು.

ಕಚೇರಿಯನ್ನು ಪ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಉದ್ಘಾಟಿಸಿದರು. ಯೋಜನಾಧಿಕಾರಿ ವೈ. ಪ್ರಕಾಶ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿನ ಜನರನ್ನು ಒಗ್ಗೂಡಿಸಿಕೊಂಡು, ಪರಿಸರ, ಆರೋಗ್ಯ, ಸ್ವಚ್ಛತೆ, ನೀರಿನ ಮೌಲ್ಯ ಸೇರಿದಂತೆ ವಿವಿಧ ಸ್ತರಗಳಲ್ಲಿ ಯೋಜನೆಯು ಹಮ್ಮಿಕೊಳ್ಳುವ ಕಾರ್ಯಕ್ಕೆ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ ಎಂದರು.

ವೇದಿಕೆಯಲ್ಲಿ ಮಹಿಳಾ ಸಮಾಜದ ಅಧ್ಯಕ್ಷೆ ನಳಿನಿ ಗಣೇಶ್, ಪಟ್ಟಣ ಪಂಚಾಯಿತಿ ಸದಸ್ಯೆ ಸುಶೀಲಾ, ಮಾಜಿ ಸದಸ್ಯೆ ಗೀತಾ ರಾಜು, ಉದ್ಯಮಿ ಹೆಚ್.ಎ. ನಾಗೇಶ್, ಯೋಜನೆಯ ಮೇಲ್ವಿಚಾರಕ ರಮೇಶ್, ಭಾರತ್ ಸ್ಕೌಟ್ ಮತ್ತು ಗೈಡ್ಸ್‍ನ ತಾಲೂಕು ಅಧ್ಯಕ್ಷ ಬಿ.ಎ. ಭಾಸ್ಕರ್, ಯೋಜನೆಯ ಸೇವಾ ಪ್ರತಿನಿಧಿಗಳಾದ ತಾರಾಲಕ್ಷ್ಮಿ, ಶೈಲಾ, ಒಕ್ಕೂಟದ ಸದಸ್ಯೆ ಟಿ.ಆರ್. ಲತಾ ಉಪಸ್ಥಿತರಿದ್ದರು.